ಆವತ್ತು ಯಾವತ್ತು ಎಲ್ಲ ತೆಗೆದು ಚರಿತಾಂತ ಸ್ತ್ರೀತ್ವ ವನ್ನಾರೋಪಿಸಿದಿರೋ ಮತ್ತೂ ತಿಳಿ ಯದಾಗುತ್ತೆ
ಆ ಯೋನಿಯಲಿ ತೋಚಿದಂತೆ ಗೀಚಿಕೊಳ್ಳೋದ ತೊಡೆದು ಸಯನ್ಸಂತ ಯೂನಿ ವರಸಲಾಗಿ ವಸ್ತುನಿಷ್ಠ ಸಗಣಿ ಸಾರಿಸಲಾದಂತೆ ಅಲ್ಲಿ ಫೇನ್ಮಣ್ಣು ಪಥಗಳಿಗೆ ಯಥಾನು ವಜನು ಹಾಕಿ ಕೂಡಿಕಳೆದು ವರ್ಗಕ್ಕೇರಿಸಿ ಸಂಯೋಜಿಸಿ ನೋಡಿದರೆ ಸಿಗೋದು ಎಲ್ಲ ಒಂದಾಗದಸಂಭವನೀಯತೆಯಷ್ಟೇ
ಇತ್ತೀಚೆಗೆ ನಿಧನರಾದ ಹಿಂದಿ ಚಲನಚಿತ್ರಗೀತಸಾಹಿತಿ, ಶ್ರೀಯುತ ಯೋಗೇಶ್ ಗೌರ್ , ಅವರ ಬಗ್ಗೆ ನಮಗೆ ತಿಳಿದದ್ದು ಕಡಿಮೆಯೇ...
ಹಾಗಿದ್ದಾಗ್ಗೆಯೂ, ಹೃಷಿಕೇಶ ಮುಖರ್ಜಿಯವರ ದಿಗ್ದರ್ಶನದ 'ಆನಂದ್' ಸಿನೇಮಾದಲ್ಲಿ ಅವರು ಬರೆದ, ಮುಖೇಶ ಹಾಡಿದ, ರಾಜೇಶ್ ಖನ್ನನ ಅಭಿನಯಿಸಿದ ಈ ಭಾವಗೀತಾತ್ಮಕ ಹಾಡು ನಮ್ಮ ಯಾವತ್ತು ಹೃನ್ಮನಗಳನ್ನು ಅದೆಂದೂ ತಾಕಿದ್ದಿದು ಹೌದು. ಹಾಡಾಗಿಸಿ ಅಮರರಾದವರೆಲ್ಲರಿಗೂ ಕಿರುಕಾಣಿಕೆಯಾರ್ಪಣೆಯಾಗಿ ಈ ಹಾಡನುವಾದ.
ಅನುವಾದಿಸುವಾಗ ಹೊಸದಾಗಿ ಕಣ್ಣ ಕೋರೈಸಿದ ಈ ಹಾಡಿನ ಸಾಲುಗಳ ತನ್ನದೇ ಆದ ಸಾಂಧರ್ಭಿಕ ಅನ್ವರ್ಥತೆಗಳು ಮತ್ತೊಮ್ಮೆ ಹೃನ್ಮನಕಂಗಳನ್ನು ಭಾರವಾಗಿಸಿದವು.
ಹಾಗ್ಗೆ, ಅನುವಾದಕ್ಕಿಳಿವ ಮುನ್ನ ಎಲ್ಲವೂ ಗೊತ್ತು ಎನಿಸುವುದು -- ಅನುವಾದಕ್ಕಿಳಿದಾಗ ಇದೆಲ್ಲ ಗೊತ್ತೇ ಇರಲಿಲ್ಲವಲ್ಲ ಎಂದಾಗವುದು.., ಇದೆಲ್ಲ ಯಥಾಪ್ರಕಾರವೇ!
ಈ ಹಾಡಿನ ಸಂಗೀತ ನಿರ್ದೇಶಕ ಸಲಿಲಚೌಧರಿಯವರು ಬೆಂಗಾಲಿಯಲ್ಲಿ ಇದೇ ಧಾಟಿಯಲ್ಲಿ ಈ ಮುಂಚೆಯೇಇನ್ನೊಂದು ಹಾಡನ್ನು ಸಂಯೋಜಿಸಿರುವುದೂ ತಿಳಿಯಿತು. ಅದರ ಸಂದರ್ಭ-ಅರ್ಥಗಳೆಲ್ಲ ಬೇರೆಯಿದ್ದರೂ ಸಂವೇದನಾಶೀಲವಾಗಿಯಂತೂ ಇರುವುದು ಅನುಭವವೇದ್ಯವಾಯಿತು.
ಅಂದರೆ, ನಮ್ಮ ಈ ಪ್ರಸ್ತುತ ಚಿತ್ರಗೀತ ಸಾಹಿತಿ ದಿವಂಗತ ಶ್ರೀ ಯೋಗೇಶ್ ಗೌರ್ ಅವರು, ಆನಂದ ಸಿನೆಮಾದ ಸಂದರ್ಭದೊಟ್ಟೊಟ್ಟಿಗೆ ಈ ಮೊದಲೇ ಸಂಯೋಜಿತವಾದ ಸಂಗೀತಕ್ಕೆ ತಕ್ಕಂತೆ ಬರೆಯುವ ಪಣವನ್ನು ಸಹಾ ಏಕಕಾಲದಲ್ಲಿ ಸುಲಲಿತವಾಗಿ ನಿಭಾಯಿಸಿದ್ದಾರೆ ಎನ್ನಬಹುದು. ಅವರಿಗೆ ನಮ್ಮ ನಮನಗಳು.
ಅಲ್ಲೆಲ್ಲೋ ಆ ಬೂಟುಗಳ ಟಕಟಕೆಯು
ಅಲ್ಲೆಲ್ಲೋ ಆ ಕೆಂಡಗಳ ಚಟಪಟೆಯು
ಅಲ್ಲೆಲ್ಲೋ ಆ ಜೀರುಂಡೆಗಳ ಕೀರಲು
ಅಲ್ಲೆಲ್ಲೋ ಆ ನಲ್ಲಿಯ ಟಿಪಟಿಪೆಯು
ಅಲ್ಲೆಲ್ಲೋ ಆ ಕಪ್ಪು ಕಿಡಕೀಯು
ಅಲ್ಲೆಲ್ಲೋ ಆ ಮಬ್ಬು ಚಿಮಣೀಯು
ಅಲ್ಲೆಲ್ಲೋ ಆ-ಕಳಿಸೋ ಗಾಳಿಮರಗೋಳು
ಅಲ್ಲೆಲ್ಲೋ ಅಡ್ಡಗೋಡೆ ಮೇಲಿಟ್ಟಂತೇನೇನೋ...
ಏಳೇಳೇಳೇಲೆಲೆಲೇಲೇಲೇ.. ಹೋ!
ಹವೆಯೊಂದು ಹೀಗೆ ಸುಳಿದಾಡೆ ಬಂತು ಲತೆಯದುರಿತು, ಹೂ ಉದುರಿತು. ಹವೆಯದಲ್ಲ, ಹೂವಿನದಲ್ಲ, ತಪ್ಪು ಯಾರದ್ದು? ಪರಿಮಳ ಹವೆಯಲಿ ಕಳದೇ ಹೋಯ್ತು, ಏನು ಉಳಿಯುತು!?
a light breeze passes by, shivers a branch, fell a flower. of the breeze, none; nor flower's; whose fallacy it is!? fragrance lost - in the thin air, nothing lasts!?
ಲತೆಯು ಪಾಂಗಿನಲ್ಲಿ ಗಂಟಿಯನ್ನಪ್ಪುತ್ತ ಸುತ್ತುತ್ತ ಬೆಳೆಯುತ್ತೆ
ಡ್ರಿಪ್ಪಿನ ತೊಟ್ಟಿಕ್ಕುವ ಲಯಕ್ಕೆ
ಮನ್ಸೂರೆ ಹಾಡತೊಡಗಿರುತ್ತಾರೆ ಪ್ರಜ್ನೆಯ
ಯಾವುದೋ ಪಾತಳಿಯಲ್ಲಿ, ಕೆಲವೇ ಚದುರದಂಗುಲಗಳಷ್ಟು ಮಣ್ಣಿಗೆ
ಅನುವಾಗುವಲ್ಲಿ, ಜೀವದಜಾಡು ಆ ಸಿಮೆಂಟುಸಾರಿಸಿದಂಗಳದಲ್ಲಿ
ಇನ್ನ್ನೂ ಮರವಾಗುವ ಹಾದಿಗುಂಟ ಒಂದು ನೇರಳೇ
ಗಿಡ, ಇರುವೆ ಜೇನುಹುಳ ಇಣಚಿಯಂತ ಒಂದು ಪರಿಸರ
-ವ್ಯವಸ್ಥೆಯಾಗಿರುತ್ತೆ, ಅಲ್ಲಿ, ಆ ಕಾಂಕ್ರೀಟುವನದಲ್ಲಿ
ಪಾರಿವಾಳವೊ ಗೂಡುಕಟ್ಟಿರುತ್ತೆ ಕಬ್ಬಿಣದ ಕಂಬಿಗಳಲ್ಲಿ
ಪಿಷ್ಟಿಗೊಬ್ಬರದುಂಬಿಸೋವಲ್ಲಿ ಹೊರಕಿರಿದ ಅಶ್ವತ್ಥವೊಂದರ
ಬ್ರಹ್ಮರೂಪಾಯ ಬೇರುಗಳ ವಿಲೋಮಚಲನೆ
ಅಥವಾ ಕಟ್ಟೋಣಗಳ ನಿರಂತರ ನಿರಚನೆ ಪುನಾರಚನೆ
ಆ ನಿಲುಗಡೆಯಿಲ್ಲದ ನಿಲ್ದಾಣದಲಿ ನಮ್ಮ ನಿಲ್ಲದೋಡುವ ರೈಲಿಗೆ
ಋಜುವಾದ ಹಸಿರುನಿಶಾನೆ ಬೀಸುವ ಸ್ಟೇಷನ್ಮಾಸ್ತರ
ಹೀಗೆ ನಮಗೆ ಕೋಳಿ ಕೂಗಿಯೇ ಬೆಳಗು ನಿಜದಲಿ
ಎಂದುಬಿಟ್ಟ ರೈಲಿಗೆ ಇಲಿಗಳ ಹಾದಿಹಿಡಿದೊಂದು ಇಣಚಿಯೂ ಬಂದು
ನಿಂದಲ್ಲಿ ಬಾಗಿಲವರೆಗೆ ಹೋದರೂ, ಬೋಗಿದಾಟದು.
ಏನಿದಾಟವು?
ಸೀಮೆಗಳು ಆಕ್ಸಿಡೆಂಟಲೇ ಆದರೂ ಯಾವತ್ತು, ಕಷ್ಟವೇ,
ಕಾಸ್ಟವೇ ಎನುವ ಸೀಮೋಲ್ಲಂಘನಯಾನವು.
ಅಲ್ಲಿ ತುದಿ ದಿಗಂತದಿ ಹರಳುಗಟ್ಟಿದ ಘನಸಮುದ್ರದಲೊಂದೆಡೆ
ಸೆಲೆಯೊಡೆವ ಕಾಚಿದರುಣಮಧ್ಯಗವಿದಂತಃಸ್ಥಿತಿ
-ಗತಿ
ದಕ್ಕಿಸಿಕೊಳ್ಳುವಾಟಕ್ಕೆ ಓಂ ಸ್ವಸ್ತಿ.
ಅಥವಾ,
ಪ್ರಕೃತಿ-ಪುರುಷನಂತ ಸಿಮೆಟ್ರಿ
ಬ್ರೇಕಿಂಗ್ನಲ್ಲಿ ವೈಲೇಟಾದ ಚಾರ್ಜ-ಪಾರಿಟಿ
ಯನ್ನ ಕಾಲವೇ
ತಿರುಗಿ ಸರಿಪಡಿಸುತ್ತಂತೆ.
------------------------------------------------ ಈಗ್ಗೆ ನಾಲ್ಕೈದು ವರ್ಷಗಳಿಂದ ಬರೆಯುತ್ತ ಬಂದಿದ್ದು .., ಇನ್ನೂ ಮುಂದುವರಿಯಲಿಕ್ಕಿರುವಂಥದ್ದು.
========================== ದಶಕವೊಂದರಷ್ಟು ಹಿಂದೆ ಗೆಳೆಯರೊಬ್ಬರ ಹನಿಗವಿತೆಯೊಂದರ ಮೇಲೆ
ಇಂಪ್ರೋವೈಸಿದ್ದು. ಅವರು ಬರೆದ್ಮುಗಿಸಿದ ಮೊದಲ ಸಾಲುಗಳಲ್ಲೇ ತೆರೆ ಬಿದ್ದಿದ್ದರೂ ನಂಥರ ತೆರೆದ ಸಾಲುಗಳು ಏನೋ ತದ್ವಿರುದ್ದವಾಗಿ ಬಿದ್ದ ಹೆದ್ದರೆಯನ್ನು ಮತ್ತೆಬ್ಬಿಸುವಂತೆ ಕಾಣುತ್ತಿದೆ -ಯೆಂದರೆ, ಅದೂ ಸರಿಯೇ ಅಲ್ಲವೇ..! ಇದೆಲ್ಲ ಡಿಸ್ಸೊನೆನ್ಸು ಇಂಕೋಹರೆನ್ಸುಗಳನ್ನು ಇ -ಸ್ತ್ರೀ ಹೊಡೆಯಲೆತ್ನಿಸುವವರಿದ್ದರವರಿಗೆಂದಿನಂತೆ ಈ ಬ್ಲಾಗಿಲಿನಗಸಿಯ ಸರ್ಜನೀಯ-ಸಾಮಾನ್ಯ -ಸ್ವಾಗತವು ಅಂಡರ್ಸ್ಟುಡ್ಗತವು!
We always come loaded
of what we never know
All our thoughts speeches
and silences
cum-laudead .
Epistemics sans ontics
Logics les pretentious
Theorems ad'hominems *
Unloading it
all et.al., with
a fart albeit
of which yet
hope Eye do **
That we play to
is the gallery of language
the eggshell of Mr Key
ನನ್ನನ್ನು ಯಾವತ್ತೂ ಬೆರಗುಗೊಳಿಸುತ್ತಲೂ ಕಾಡುವ, ಇಮ್ತಿಯಾಜ ಅಲಿಯ 'ದಿದ್ಗ್ದರ್ಶನ'ದ ರಾಕ್`ಸ್ಟಾರ್ ಸಿನೆಮಾದಿಂದ, ಇರ್ಶಾದ ಕಮೀಲನ ರಮ್ಯ ಸೂಫಿ/ಆಧ್ಯಾತ್ಮಿಕ ಅನ್ಯೋಕ್ತಿಗಳಿರುವ, ರಹಮಾನನ ಸಿಂಫೋನಿಕ ಸಂಯೋಜನೆಯ, ಮೋಹಿತ್ ಚೌಹಾನನ ವಿಶಿಷ್ಟ ಕಂಠದಲ್ಲಿ ಮೂಡಿಬಂದ, ನನಗೆ ತುಂಬಾ ಆಪ್ತವಾದ ಒಂದು ಗೀತ.. ಫಿರ್ ಸೇ ಉಡ್ ಚಲಾ Hindi/Roman Lyrics as per the original lyricist Irshad Kamil's website: http://www.irshadkamil.com/romandetails/458 An interesting trans-creation in English provided by the lyricist himself: http://www.irshadkamil.com/translationsdetails/458 The following is a juggle-bandhi between translation and trans-creation...
ಮತ್ತೆ ಹಾರಿ ಹೊರಟೆ
ಹಾರಿ ತೊರೆದದ್ದಾಯ್ತು ಇಹವನು
ಕೆಳಗೆ ನಾ
ನೀಗ ನಿನ್ನ ವಶ
ವೋ ಹವೆಯೇ
ದೂರ ದೂರವೀಗ ಜನಪದರ
ಮೈಲಿಗಟ್ಟಲೆ ದೂರವೀ ಕಣಿವೆಗಳು
ಮತ್ತೆ,
ಧೂಪ ಧೂಪವೀ ಶರೀರ
ಚುಂಬಿಸೆ ಬರುವವು ಘನ ಘನವು
ಆದರೂ,
ಘನವೊಂದ್ಯಾವುದೋ ಎಲ್ಲೋ ಸೋಂಕಿ
ಒದ್ದೆಯಾಗೋದು ತನುವು
- ಅದಾಗದು!
ಯಾವ ನೆಲೆಯಲೂ ನಿಂದಿಲ್ಲ
ನಾ
ನೆಲ್ಲೂ ನನ್ನನೂ ಕಂಡಿಲ್ಲ
ಇದು
ಒಳಗುದಿಯಂತೂ ಹೌದು
ನಾ
ಕುದ್ದವನಲ್ಲ
ಶಹರ ಒಂದೇ ಹಳ್ಳಿ ಒಂದೇ
ಜನ ಒಂದೇ ಹೆಸರು ಒಂದೇ
ಹೋ..
ಮತ್ತೆ ಹಾರಿ ಹೊರಟೆನು.. ನಾ..
ಮಣ್ಣಿನ್ಹಾಂಗ ಕನಸೂ ಇವು ಎಷ್ಟೂನೂ ರೆಪ್ಪೆ ಬಡಿದು ಝಾಡಿಸು ತಿರುಗಾ ಬರುತಾವೆಯೋ!*
ಎಷ್ಟೊಂದೆಲ್ಲ ಕನಸೂ
ಯಾವ ಥರಾ ನಾನು
ತೊರೆದದ್ದಿದೆ ಮುರಿದಂತೆ
ಯಾಕೋ..
ಮತ್ತೆ ಗೂಡಿ ಹೊರಟವೇ
ಯನ್ನನೆತ್ತಿ ನೆಗೆದವೇ
ಇವು ಯಾಕೋ..
ಒಮ್ಮೊಮ್ಮೆ ಕವಲು ಕವಲಾಗಿ
ಒಮ್ಮೊಮ್ಮೆ ಚಿಗುರು ಚಿಗುರಾಗಿ
ಎನ್ನ ಜೊತೆಜೊತೆಗಾಗಿ ಇವು ತಿರುತಿರುಗಿ
--------------------------------------------------------------------------------------------------------------- ಇದು ಮುಂದುವರಿದ ಪ್ರತಿಸ್ಪಂದನದ ಯಾದೃಚ್ಛಿಕ ಭಾಗ, "Eternal Sunshine of the Spotless Mind" ಎಂಬ 'ಅನೇರ ನಿರೂಪಣೆ 'ಯ ಸಿನೆಮಾಗೆ ... ಈ ಮುಂಚೆ ಇದರ 'ಶೀರ್ಶಿಖೆ'ಯನ್ನು 'ಅನಂಗಚಿತ್ತದ ಅವಿರತ ಹೊಳಹು' ಅಂತಿಟ್ಟುಕೊಂಡಿದ್ದು ಹೌದಾದರೂ... 'spotless' ಎಂಬುದರ ಅರ್ಥ 'ಕಲೆರಹಿತ' ಅಂತಾಗುತ್ತದೆಯೇ ಹೊರತಾಗಿ 'ಜಾಗ್ಗೆ-ಯಿಲ್ಲದ' (spot-less) ಅಂತಲೇನೂ ಬಳಕೆಯಲ್ಲಿಲ್ಲವಂತ ಜ್ಞಾನೋದಯವಾಯಿತಾದರೂ... ಅರ್ಥೈಸಿದಂತೆ ಕಾವ್ಯವಲ್ಲವೇ? ಅವರವರಿಗಾದದ್ದೂ ಅರ್ಥವಲ್ಲವೇ? ಚಿತ್ತವು ಮಸ್ತಿಷ್ಕವೇ ಅಥವಾ ಇನ್ಯಾವುದೋ ಒಂದು ಜಾಗ್ಗೆಯಲ್ಲಿ ಇದೆ/ಇಲ್ಲ ಎನ್ನುವುದು ಎಂದಿಗೂ ಅನಿರ್ಧಾರಿತವಷ್ಟೇ? ಎಂಬಿತ್ಯಾದಿ ಜಿಜ್ಞಾಸೆಗಳು ಉಳಿಯಿತಾಗಿಯಾದರೂ ... ಪೋಪರ ಕವನವನ್ನೂ, ಕೌಫ್ಮನ್ನರ ಚಿತ್ರಪಟವನ್ನೂ ತುಲನಾತ್ಮಕವಾಗಿ ಗಮನದಲ್ಲಿರಿಸಿ... "ನಿರ್ವಿಕಲ್ಪ ಚಿತ್ತದ ಚಿರಂತನ ಬೆಳಗು" ಅಂತಮುಂತಾಗಿ ಮುಂದಾದದ್ದು... ---------------------------------------------------------------------------------------------------------------
ಪ್ರಿಯ ರನ್ನನೇ,
ವಿಷಯಗಳ ಮೇಲೆ ಬೆಳಕು ಚೆಲ್ಲುವ
ರವಿ, ವ್ಯಾಖ್ಯಾನ ಪ್ರಿಯ ಕವಿ
ಸಮಯ ಕುಪ್ಪಳಿದಾಯ್ತು
ಅಂತಾಗಿ
ಸ್ವಯಂಪ್ರಭೆಯಿಲ್ಲದವು ಕೂಡಾ, ಅಲ್ಲ,
ಸ್ವಪ್ರಭಾವಳಿ ಇಲ್ಲದವು ಮಾತ್ರ
ಝಗಮಗಿಸೋದು ಈಗ
ಲಂತೂ ಅಂಥಾ ಕಾವ್ಯ - ಕವಿಗಳು ಚಂದ್ರ
ನ ತೋರುಮುಖದಂತೆ ಬಿಳೀ
ಸೂರ್ಯನೆಡೆಗೆ ಮುಖ ಮಾಡೋದೂ ಇಲ್ಲ
ಸೂರ್ಯಕಾಂತಿ ಹೂ ಹಿಂಭಾಗವಿದ್ದಂತೆ
ಸದಾ ನೆರಳಿಗೀಡಾಗಿ ಗುಹ್ಯವೋಗುಹ್ಯ
ವಂತ ಕೂತುಬಿಡೋದು ಮರೆಯಲ್ಲಿ
ಮಂಜಿನ ತೆರೆಯಲ್ಲಿ
ಹೊತ್ತು ಹೋಗದವರು, ಮತ್ತೂ ಹೋಗ
ಬೇಕಾದವರು ತಂತಮ್ಮ ಕಂನಡಕಂಗಳ ಕೊಳಾಯ್ಸಿಕೊಂಡು
ಯಾವುದೋ ಟಾರ್ಚುದೀಪದ ಬೆಳಕಲ್ಲಿ
ಶೋಧಿಸ ಹೊರಟುಬರುತ್ತಾರೆ ನಮ್ಮೆಡೆಗೆ...
===================================
ಮೇಲಿನದ್ದು ಮೊದಲು ಮೂಡಿದ ಸರಳ ಆಕೃತಿ ಅದನ್ನು ಈ ಕೆಳಗಿನಂತೆ ತಿದ್ದಿ ಇನ್ನೂ ಗೋಜಲು ಮಾಡುವುದರ ಮೂಲಕ ಅರ್ಥಾತರ್ಥಾರ್ಥ ಸಾಧ್ಯತೆಗಳನ್ನ ವಿಸ್ತರಿಸಬಹುದು...
===================================
ಪ್ರಿಯ ರನ್ನನೇ,
ವಿಷಯಂಗಳ ಮೇಲೆ ಬೆಳಕಂ ಚೆಲ್ಲುವ
ರವಿ, ವ್ಯಾಖ್ಯಾನಾಂಪ್ರಿಯ
ಕವಿ ಸಮಯಂ
ಮು ಕುಪ್ಪಳಿದಾಯ್ತುಂ
ಮಂತಲಾಗಿ ಸ್ವಪ್ರಭಾವಳಿ ಯಿಲ್ಲದವು ಕೂಡಾ
ಹೀನವು ಮಾತ್ರವು
ಝಗಮಗಿಸೋದು ಈಗ
ಲಂತೂ ಅಂಥಾ ಕಾವ್ಯ - ಕವಿಗಳು ಚಂದ್ರ
ನ ತೋರುಮುಖದಂತೆ ಬಿಳೀ
ಸೂರ್ಯನೆಡೆಗೆ ಮುಖ
ಮಾಡೋದೂ
ಇಲ್ಲ - ಸದಾ ಸೂರ್ಯಕಾಂತಿ
ಹೂ ಹಿಂಭಾಗವಿದ್ದಂತೆ
ನೆರಳಿಗೀಡಾಗಿ ಗುಹ್ಯವೋ
ಗುಹ್ಯವಂತ
ಕೂತುಬಿಡೋದು ಮರೆಯಲ್ಲಿ
ಮಂಜಿನ ತೆರೆಯಲ್ಲಿ ಮಬ್ಬ
ಹೊತ್ತು
ಹೋಗದವರು, ಮತ್ತೂ
ಹೋಗಬೇಕಾದವರು ತಂತಮ್ಮ ಕಂ
ನಡ
ಕಂಗಳ ಕೊಳಾಯ್ಸಿ
ಕೊಂಡು ಯಾವುದೋ ಟಾರ್ಚುದೀಪ
ದ ಬೆಳಕಲ್ಲಿ ಶೋಧಿಸ
ಹೊರಟುಬರುವರು
ನಮ್ಮೆಡೆಗೀಗ
------------------------------------------------------------------------------------------------------------ ಬಹುಶಃ ಓದುಗನೊಬ್ಬನಿಗೆ ಈ ಮೇಲಿನೆರೆಡು ಪ್ರಯತ್ನಗಳ ಮಿಶ್ರಣದಲ್ಲಿ ಆಗಬಹುದಾದ ಇನ್ಯಾವುದೋ ಒಂದು ರಚನೆ ಹೆಚ್ಚು ಅಪ್ಯಾಯಮಾನವಾಗಿ ಕಾಣಬಹುದು... ಆ ದಿಶೆಯಲ್ಲಿ ಈ ತಾಣದ 'ಸರ್ಜನೀಯ ಸಾಮಾನ್ಯ' ಲೈಸೆನ್ಸ್ ಅನ್ನು ತಂತಮ್ಮ ಪೊಯೆತಿಕ್ಕ್ಲು ಲಯಿಸೆನ್ಸಿ ನ ಜೊತೆಜೊತೆಗೆ ಬಳಸಿಕೊಂಡು ಪ್ರಯತ್ನಿಸುವವರಿಗೆ ಸ್ವಾಗತವು ಈ ಮೂಲಕ ಅಂಡರ್ಸ್ಟುದ್ಗತವು!
ನನ್ನೊಳಗಣ ಕನಸುಗಳ--ಆಶಯಗಳ ಪರಂಪರೆ ಪರಂಪರೆಯಿಂದ ಮುಂದೋಡುವ ಥೀಸಸ್ಸನ ಶಿಪ್ಪು
ಬೆಳಿಗ್ಗೆ ಎದ್ದ ರೀತಿ - ಘಳಿಗೆ ಅಷ್ಟು ಮುಖ್ಯವಾಗಿದ್ದೇನಲ್ಲ. ಮಧ್ಯಾಹ್ನ ಸ್ವಲ್ಪ ಅನ್ಕಂಟ್ರೋಲ್ಡ್ ಹಾರಾಟ, ಕೊನೆಗೆ ಸ್ವನಿರಾಕರಣೆಗಳು. ಫಿಸಿಕಲಿ ಫಿಸಿಕ್ಸಿನಿಂದ ಹಿಡಿದು ಕಳರಿಪಯಟ್ಟಿಗೆ ಜಿಗಿದರೂ, ತರ್ಕಗಳ ವರ್ತುಲದೇಣಿಗಳನ್ನೇರುತ್ತಲೇ ಹೊರಟಿದ್ದ ಮನಸ್ಸು. ನಂಗೆ ನಾನಿರೋ ರೀತೀನೇ ಬೇಡವಾಗಿ ದೂರ ಓಡೊ ಯತ್ನದಲ್ಲಿ ಹಾಗೆ ಜಿಮ್ನಾಸ್ಟಿಕ್ ಜಿಗಿತಗಳನ್ನು ಪ್ರಯೋಗಿಸಿಕೊಂಡುಹೊರಟಿದ್ದು...
ಎಷ್ಟೇ ದ್ವೇಶಿಸಿದರೂ ನನ್ನ ನಾನು, ನನ್ನಿಂದ ನನಗೆ - ಆ ಘಳಿಗೆಯ ನನ್ನಿಂದ ನನಗೆ - ನಿರ್ಗಮನ - ಆ ಕ್ಷಣದ ನಿರ್ಗಮನ ನಿರ್ವಾಹಗಳಿಲ್ಲ. ಎಲ್ಲಿ ಒಡಿದರೂ ನಾನು, ನನ್ನನ್ನ ನೆರಳಿನಂತೆ ನಾನು ಹಿಂಬಾಲಿಸಿಕೊಂಡು ಬರೋದು. ಅಥವಾ ಆ ವರ್ತುಲದೇಣಿಗೆ ಆ ಮಟ್ಟಿಗೆ ರೇಜಿಗೆಯಾಗಿ ಅದರಿಂದ ಬೇರೆ ವರ್ತುಲದೇಣಿಗೆ ಹಾರಿ ಬೀಳಕ್ಕೆ ಹೀಗೆ ಓಡುತ್ತ - ಅಥವಾ ಓಡಲೆತ್ನಿಸುತ್ತ - ಇರೋದು. ನೆತ್ತಿಮೇಲಣದಾಗಸದಲ್ಲಿ ಬೇರೆ ದಿಕ್ಕಿಂದ ಸೂರ್ಯನೋ, ಚಂದ್ರನೋ, ಅಥವಾ ಬೀದಿದೀಪವೋ ಮೂಡಿದರೆ ಆ ನನ್ನ ಛಾಯೆಯೇ ಬದಲಾಗಬಹುದಲ್ವ ಅಂತ ಕ್ಷೀಣ ಆಸೆ--ಆಕಾಂಕ್ಷೆಯ ಎಳೆಗಳು. ಹ್ಯಾಗೆ ಈ ಹೊತ್ತಿನ ನನ್ನನ್ನ, ನಾನು - ಈವತ್ತಿನ ಮಟ್ಟಿಗಾದರೂ - ಬದಲಾಯಿಸುವುದು..? ಊಹೂಂ.., keep hitting the attractor basin, keep ducking the ball...
ಹೀಗೆ ಅರೆಬರೆ ಮನಸ್ಸಿಂದ - ಅನ್ಯರೀತ್ಯಾ ತೀವ್ರ ಮನಸ್ಸಿಂದ - ಫಿಸಿಕಲಿ - ವರ್ಚುಯಲಿ ತುಯ್ದು ಅಲೆದಾಡುತ್ತ.. ..ಆಯಾಚಿತವಾಗಿ ಕಮೆಂಟುಯೋಗ್ಯ ಕವನ-ಕವಿ ಜೋಡಿ ಸಿಗುತ್ತೆ. 'ದುರಹಂಕಾರಿ' ಅಂತೂ ಜಾಗೃತ. 'ಅನಂಗ ಚಿತ್ತದ ಅವಿರತ ಹೊಳಹು' ಅಪ್ಲೋಡಾಗೋ ಹೊತ್ತಿಗೆ ರಾತ್ರಿ ಹತ್ತು ದಾಟಿ, ಅವಸರದಲ್ಲೆಲ್ಲೋ ಹೊಟ್ಟೆಪಾಡು ಮುಗಿಸ್ಕಂಡು, ಅಮ್ಮ-ಅಣ್ಣನ್ನ ಮಾತಾಡಿಸ್ಕಂಡು, ರಾತ್ರಿ ನಿದ್ದೆಯೇ ಹಾಳಾಗ್ಬೋದು ಅನ್ನೋ ವಾರ್ನಿಂಗ್ ಇಟ್ಕೊಂಡು, ಏನೋ ಒಕ್ಕಣೆಯಿಟ್ಟು 'ನಾಲ್ಕು ಸಮಸ್ತ'ರಿಗೆ '..ಹೊಳಹು' ಕಾಣುವಂತೆ ಕೊಂಡಿಯಡಕವಿಟ್ಟು ವಿ-ಭಿನ್ನವತ್ತಳೆ ಕಳಿಸುವಹೊತ್ತಿಗೆ ಹನ್ನೆರಡು ದಾಟಿ ಅಲ್ಲೇ ಕಣ್ಣೆಳೆಯುತ್ತಿದ್ದುದು. ಹಾಗೆ ನನ್ನ ನಾನು ಹುಸಿ-ಬಲವಂತ ದೂಡಿಕೊಂಡು ರೂಮಿಗೆ ಬಂದು ಬಿದ್ದುಕೊಂಡಿದ್ದು ತಾತ್ಕಾಲಿಕವಂತಂದುಕೊಂಡು, ಉಟ್ಟ ಬಟ್ಟೆಯಲ್ಲಿಯೇ. ಮತ್ಯಾವಾಗಲೋ ಎಚ್ಚರಾದಾಗ ಲೈಟು ಹಾಗೇ ಉರೀತಿದ್ದುದು, ಪ್ಯಾಂಟು ಅಲ್ಲೇ ಸ್ವಲ್ಪ ಸಡಿಲ ಜಾರಿಕೊಂಡಿದ್ದುದು, ಯಾವ ಮಾಯಕದಲ್ಲೋ ಬೆಡ್ಷೀಟು ಎಳಕೊಂಡಿದುದು...
*****
ಊಹೂಂ!
ನಾನು ಬರೆಯಲಿಕ್ಕೆ ಎದ್ದು ಕೂತದ್ದು ಈ ಪುರಾಣವನ್ನೇನಲ್ಲ. ಕೇಂದ್ರ ವಿಷಯ ಸ್ವಲ್ಪ ಬೇರೆಯೇ. ಆದರೆ ಕಥಿಸುವುದರ ಕುರಿತಾಗಿಯೇ ಇರುವ ನಮ್ಮದೊಂದು ಥಿಯರಿಯಿದೆ : ಯಾವುದೇ ಒಂದು ಸ್ಪುರಣೆಯು ಅದರ ಅಮೂರ್ತತೆಯಿಂದಾಚೆಗೆ ಕೆಳಪಟ್ಟು ರಕ್ತಮಾಂಸಗಳ ಜೀವಾಕೃತಿಯಾಗಿ - ಅನುಭಾವವಾಗಿ - ಬಂದಿಳಿಯುವುದರ ಹಿನ್ನೆಲೆಯಲ್ಲಿ ಅದನ್ನ ಹಾಗೆ ವಿಶಿಷ್ಟಗೊಳಿಸುವ - transcend ಮಾಡುವ ಒಂದು ಪರ್ಯಾವರಣ - context -ಇರುತ್ತೆ. ಆ ಒಂದು ಅನುಭಾವಕ್ಕೆ ಪಾತ್ರನಾದವನಿಗೆ ಮಾತ್ರವೇ ಆಪ್ತವಾದ ಒಂದು ಲೋಕದಲ್ಲಿ ಆ ಒಂದು ಸೃಜನಕ್ರಿಯೆಯು ಘಟಿಸಿರುತ್ತೆ. ಎಷ್ಟೋ ಬಾರಿ ಆ ಹಿನ್ನೆಲೆಗಳನ್ನ ಕಲೆಯಲ್ಲಿ ದಾಟಿಸುವ ಯತ್ನವಿರದೇ, ಅಥವಾ, ದಾಟಿಸುವ ಯತ್ನವಿದ್ದೂ ಅದು ಸೋತು, ಇಡೀ ಸೃಜಿತಹೃದಯವೇ 'ದಾಟದೇ' ಉಳಿದುಬಿಟ್ಟ ಆರೋಪಗಳಾಗುತ್ತವೆ. ಹೆತ್ತಿದ್ದು ಎಷ್ಟೇ abstract ಆಗಿದ್ದರೂ ಹೆತ್ತವರಿಗೆ ಅದು ರಕ್ತಮಾಂಸಗಳಿಂದ ಮೈವೆತ್ತ ಮುದ್ದ್ದುಕೂಸಾಗಿಯೇ ಕಾಣುತ್ತಿರುತ್ತೆ. ಆದರೆ ಅದರ ಕುರಿತು ಸರಿಯಾಗಿ ಅನುಭವ-ಪ್ರವೇಶಗಳಿಲ್ಲದಿದ್ದವರಿಗೆ - ಇದ್ದವರಿಗೂ ಕೂಡಾ ಕೆಲವೊಮ್ಮೆ - ಅದು ಬರೀ ನೀರಸ-ನಿರ್ಜೀವ ಬಡಬಡಿಕೆಗಳಾಗಿ ಕಂಡುಬರುವ ವಿದ್ಯಮಾನದೊಂದಿಗೆ ಕೃತಿ ಯಾ ಕೃತಿಕಾರ ಸೋತ ಆರೋಪಗಳು ಆಗಿ ಬರುತ್ತವೆ.
ಓದುಗನಿಗೆ ಇದನ್ನ ನೀಗಿಕೊಳ್ಳಲು "ಅರ್ಥವಾದ ಸಾಲುಗಳ ಬೆಳಕಲ್ಲಿ ಅರ್ಥವಾಗದ ಸಾಲುಗಳನ್ನ ಓದಿ" ಎನ್ನುವ ಎಕ್ಸಪರ್ಟ್ ವಿಮರ್ಶಕರ ಸಲಹೆ ಇದೆ. ಆದರೆ ಕೃತಿಕಾರ ಹ್ಯಾಗೆ 'ಇಂಪ್ರೋವೈಸ್' (ಹೆರುವವರ ನಿಘಂಟಿನಲ್ಲಿ ಹಾಗೊಂದು ಪದದ ಇರುವಿಕೆಯೇ ಬಹುಮಟ್ಟಿಗೆ ಸಂಶಯ!) ಮಾಡಿಕೊಳ್ಳಬಹುದು..? ಇಲ್ಲಿ ಹಿಂದೂಸ್ತಾನಿ ಕಛೇರಿ ಪದ್ದತಿ ಒದಗಿಬರಬಹುದು : ಮೊದಲು ಮಂದ್ರಾಲಾಪಗಳ ಆಸ್ಥಾಯಿ ಹಿಡಿದು ತನ್ಮೂಲಕ ಕೃತಿ ಆಗಿ ಬರಬೇಕಾದ context/ಪರ್ಯಾವರಣ/ಲೋಕವನ್ನು 'ಕಟ್ಟಿಕೊಡುವುದು'; ತದನಂತರ ಸ್ವಮನೋಧರ್ಮದ ವ್ಯಭಿಚಾರೀಭಾವಗಳ ಚಲನೆಗಳ ಹೊಳೆಯಿಸುವುದು.
--ಮಲಗುವ ಮುಂಚಿನ ತುಯ್ದಾಟಗಳ ಹೊತ್ತಲ್ಲಿ ಕಪೋಲದಲ್ಲಿ ಹಾಗೊಂದು ಥಿಯರಿಯ ಅಲೆಗಳು ಕೂಡಾ ಅಲೆದಾಡಿಕೊಂಡಿದ್ದವು.
*****
ನಮ್ಮ ಈ ಎಲ್ಲ ವೈಯಕ್ತಿಕ ಹಾರಾಟ ಹೋರಾಟಗಳ ಪ್ರಾಚೀನ ಅರ್ವಾಚೀನ ಪರಂಪರೆಯಲ್ಲಿ ಜೋಡಣೆಯಾಗುತ್ತ ಬರುವವು ನಮಗೆ ಬೀಳುವ ಕನಸುಗಳು. ಸುಪ್ತಮನಸ್ಸು ಜಾಗೃತಮನಸ್ಸನ್ನು ಡ್ರೈವ್ ಮಾಡುವುದು ಸಂಗತವಿರುವಂತೆಯೇ ಜಾಗೃತಮನಸ್ಸಿನ ವ್ಯಾಪ್ತಿಯ ವಿದ್ಯಮಾನಗಳು ಸುಪ್ತಮನಸ್ಸಿಗೆ ಇಂಧನ-ಸಂಸ್ಕಾರಗಳನ್ನ ಈಯುವುದು ಕೂಡಾ ಸಂಗತವೇ. ಹಾಗೆ ಸಂಸ್ಕಾರಿತರಾದ 'ಸುಪ್ತಮನಸ್ಸು' ಎನ್ನುವ alleged ನಾಟಕಕಾರರು ಸ್ವಪ್ನರಂಗಭೂಮಿಕೆಯಲ್ಲಿ ಅದ್ಭುತ ಕೃತಿಗಳನ್ನ ಆಡಿಸುತ್ತಿರುತ್ತಾರೆ. ಮೇಲ್ನೋಟಕ್ಕೆ ಅಸಂಗತ-ಅಸಂಬದ್ಧಗಳೇ ವಿಧಾನಪ್ರಧಾನವಾಗಿರುವಂತೆ ತೋರುವ ಇವುಗಳನ್ನ 'ಸ್ವಪ್ನಸಂಗತ'ವೆಂಬ ತರ್ಕ-ವಿಧಾನಾತ್ಮಕವಾಗಿಯೇ ಅರ್ಥೈಸೋಣವಾಗಬೇಕಾಗುತ್ತದೆ. ಬಹುವಾಗಿ ಎಚ್ಚರಾದ ನಿಮಿಷಗಳಲೇ ಮರೆವಿಗೀಡಾಗುವ ಈ ರಂಗಪ್ರಯೋಗಗಳ ಅಂಕಗಳನ್ನ ಆ ಕೂಡಲೇ ಮೆಲಕುಹಾಕುತ್ತ ಅನುಸಂಧಾನಿಸಿಕೊಳ್ಳಬೇಕಾಗುತ್ತದೆ. ಅಚಾನಕ್ಕನೆ ಎಚ್ಚರಾದಾಗ ಮರೆತುಹೋಗುವುದರೊಳಗಡೆಯೇ ಬರೆದು ಉಳಿಸಿಬಿಡೋಣವಂತ ಕೂತರೂ.. ಉದ್ಧ ಪೀಠಿಕೆಗಳ ಲಹರಿಯಲ್ಲಿ.. ಊಹೂಂ! ಸ್ವಪ್ನರಂಗದ ಲೇಟೆಸ್ಟ್ ನಾಟಕದ ಅದ್ಭುತಹೊಳಹುಗಳ ಲೇಟೆಸ್ಟ್ ಅಂಕಗಳು ಮರೆವಿನ ಪರದೆಯ ಮರೆಗೆ ಇನ್ನಿಲ್ಲದಂತೆ ಸರಿದೇ ಬಿಡುತ್ತವೆ.
*****
ಎಚ್ಚರಾಗೋದಕ್ಕೆ ಸ್ವಲ್ಪಮುಂಚೆ.. ಮನೆಯಲ್ಲಿ ತಟ್ಟೆಯಲ್ಲಿ ಅಮ್ಮ.. ಬಾಳೆಹಣ್ಣು ಪಾಯಸ ಬಡಿಸುತಿದ್ದಳು. ಏನೇನೋ ನೆನಪುಗಳು ಕಲಕಿ ಬಾಳೆಯ ತುದಿಯಲ್ಲಿ ದಕ್ಷಿಣೆಕಾಸುಗಳು ಪ್ರತ್ಯಕ್ಷವಾದವು. ಅಥವಾ ನಾನೇ ಅವುಗಳನ್ನ ಪ್ಯಾಂಟಿನ ಹಿಂದಿನ ಜೇಬಿನಿಂದ ತೆಗೆದಿಕ್ಕಿದೆ. "ಯಾವುದೋ ಪೂರ್ವಜನ್ಮದ ಧನ್ಯತೆಯ ಕ್ಷಣಗಳ ಋಣಭಾರದ ಸ್ಮರಣಿಕೆಗಳು ಇವು, ಅಮ್ಮ!" ಅಂತ ಏನೋ ಒಂದು ಅದ್ಭುತ ನಾಟಕೀಯ ಡೈಲಾಗು ಉದುರಿಸಿದೆ.
*****
ಅಲ್ಲಿನ ಸ್ಮರಣೆಯ ಪ್ರಕಾರ ಆ ದಕ್ಷಿಣೆ-ಕಾಸುಗಳ ಮೂಲದಲ್ಲಿ ಮನದುಂಬುವಂತೆ ಊಟವಿಕ್ಕಿದವರು ಪೂರ್ಣಿ-ಹರಿಣಿಯರು! ಎಷ್ಟು ಹಳೆಯ ಸ್ಮರಣೆ! ಇದು ಕನಸೊಂದರ ಚರಿತ್ರೆಯಾ? ಅಥವಾ ಜಾಗೃತಾವಸ್ತೆಯ ನನ್ನ ಚರಿತ್ರೆಯಲ್ಲಿನ ವಿದ್ಯಮಾನಗಳ ಸ್ವಪ್ನ ರೂಪಕವಾ?? "ಏನೋ ಒಂದು ತೊಟ್ಟು ಪ್ರೀತಿ ವಿಶ್ವಾಸಕ್ಕೆ ಹಂಬಲಿಸುವ ಹೈರಾಣು ಮನಕ್ಕೆ ಹಾಗೆ ನಿಜಕ್ಕೂ ಪ್ರೀತಿ-ವಿಶ್ವಾಸಗಳು ಸಿಕ್ಕಿದ ದಾಖಲೆ ನಿಜಚರಿತ್ರೆಯಲ್ಲಿದ್ದರೆ ಅದು ಅವರಲ್ಲಿ ಮಾತ್ರವಿರಬೇಕು" ಅಂಥ ಇದನ್ನು ವ್ಯಾಖ್ಯಾನಿಸಲಾ? ಈಗ ಜಾಗೃತನಾದವನು ನಿಜಚರಿತ್ರೆಯನ್ನ ತಡಕಾಡಿನೋಡಿದರೆ ಸರಿಯಾಗಿ ಅಂಥಾ ಯಾವ ಘಟನೆಯೂ ನೆನಪಿಗೆ ಸಿಲುಕುತ್ತಿಲ್ಲವಲ್ಲಾ? ಈ ದಕ್ಷಿಣೆಕಾಸುಗಳ ಮೂಲವೆಲ್ಲಿ ಹಾಗಾದರೆ? ಮತ್ತೆ ಇಲ್ಲಿ ಇನ್ನೊಂದು ಗಮ್ಮತ್ತೆಂದರೆ, ಪ್ರೀತಿ ವಿಶ್ವಾಸಗಳ ಕ್ಷೇತ್ರದ ಇತರ ಅಭ್ಯರ್ಥಿಗಳಾರೂ ಸ್ವಪ್ನಲೋಕದಲ್ಲಿ - ನೇರವಾಗಿ ಬರುವುದು ಬೇಡ - ಸಂಕೇತ/ಸೂಚ್ಯವಾಗಿಯೋ, ವಿಸ್ಮೃತಿಗೀಡಾಗುತ್ತಿರುವ ಸ್ಮರಣೆಯಾಗಿಯೋ, ಇಲ್ಲಾ ಕನಸಾಗಿಯಾದರೂ ಹೊಕ್ಕು ಬಳಸಾಡಿದ ಯಾವುದೇ "ದಾಖಲೆ" ಇಲ್ಲವಲ್ಲ!
*****
ಇದರ ಹಿಂದೆ ಇನ್ನೂ ಕೆಲವು ಅಂಕಗಳಿದ್ದವು. ಎಚ್ಚರಾಗುವ ವೇಳೆ ಒಟ್ಟಾರೆ ಅದ್ಭುತ ನಾಟಕವೊಂದಾದ ಸಂತೃಪ್ತಿಯಿತ್ತು. ಈಗ ನೆನಪಿಗೆ ಅಲ್ಪಸ್ವಲ್ಪ ಸಿಲುಕಿದ ಕೊನೆಯ ಅಂಕದಿಂದ ಕೆಲವು ಅಂಶಗಳು ಹೊಳೆದು ಕಾಣುತ್ತಿವೆ:
ಈ ಸ್ವಪ್ನರಂಗಪ್ರಯೋಗಗಳು ಕೆಲವೊಮ್ಮೆ ಏಕಪಾತ್ರಾಭಿನಯದ ಥರ. ಪ್ರತಿಯೊಂದು ಪಾತ್ರಗಳಲ್ಲಿ ನಾನೇ ಪರಕಾಯ ಪ್ರವೇಶಿಸಿದಂತಿರುವುದರ - ಪ್ರತೀ ಜೋಡಿ ಕಣ್ಣುಗಳ ಮುಖಾಂತರ ನಾನೇ ನೋಡುತ್ತಿರುವಂತಿರುವುದರ - ಜೊತೆಜೊತೆಗೆ ಎಲ್ಲರನ್ನೂ ಒಟ್ಟಂದದ ಮಟ್ಟದಲ್ಲಿ ನೋಡುವ ಅಸ್ಪಷ್ಟ ಇರುವಿಕೆಯ ಪ್ರೇಕ್ಷಕ ಸಾಕ್ಷಿಯೂ ನಾನೇ! ('ಇನ್ಸೆಪ್ಷನ್' ಪ್ರೇರಣೆ?)
ನನ್ನತನ ತುಸು ಹೆಚ್ಚಾಗೇ ಇರುವ ಪಾತ್ರಗಳಿಗೆ (ಅಂದರೆ ಯಾರಲ್ಲಿ ಬಹುವಾಗಿ ನನ್ನನ್ನು ನಾನೇ ಕಾಣುತ್ತೇನೋ ಆ ಪಾತ್ರಗಳು) ಅವುಗಳದ್ದೇ ಆದ ಸ್ವಪ್ನಚರಿತ್ರೆಗಳಿರುವುದು ('ಲೂಸಿಡ್ ಡ್ರೀಮಿಂಗ್'ನ ನೆರಳು?).., ಅಷ್ಟೇ ಏಕೆ, ಕನಸಿನೊಳಗೆ ಕನಸುಗಥೆ-ಕನಸುನಾಟಕಗಳು ಕೂಡಾ! ('ಲೂಸಿಯಾ' ಪ್ರಭಾವ?)
ಯಾವುದೂ ಸ್ವಯಂಭುವಲ್ಲ - ನಿರ್ವಾತದಲ್ಲಿ ಸೃಷ್ಟಿಕ್ರಿಯೆ ಜರುಗುವುದು ಸಾಧ್ಯವಿಲ್ಲ. ಪರ್ಯಾವರಣದ ಅಣು-ರೇಣು-ತೃಣ-ಕಾಷ್ಟಗಳೇ ರೂಪಾಂತರಗೊಳ್ಳುತ್ತ ಒಟ್ಟಂದವೆಂಬುದು ಹುಟ್ಟುಗಟ್ಟುವುದು. --ಇದು ಸುಪ್ತಮನದ ಸ್ವಪ್ನರಂಗಭೂಮಿಕೆಗೂ ಅನ್ವಯ. ಅಲ್ಲಿನ ಮೂಲಧಾತುಗಳು ಅಂತ ಭಾಸವಾಗುವವು ಕೂಡ ನಿಜಜೀವನದ ಸಧ್ಯದಿಂದ ಜಾತವಾಗಿರುವವು (ಹಾಗಿದ್ದಾಗಿಯೂ ಸಹ ಅಲ್ಲಿ ವಿಲಕ್ಷಣ ಸ್ಪಾಂಟೇನಿಟಿಗಳೇ ರಾರಾಜಿಸುವವು!). ನನ್ನಲ್ಲಿ ಬಂದು ಒಂದು ವಾರವಿದ್ದು ಹೋದ ಅಮ್ಮ, ಅರೆಹೊಟ್ಟೆಯಲ್ಲಿ ಮಲಗುವಾಗ ಕೊನೆಯಲ್ಲಿ ತಿಂದ ಬಾಳೆಹಣ್ಣು, ಪ್ಯಾಂಟಿನ ಹಿಂದಿನ ಜೇಬಿನಲ್ಲಿ ಹಾಗೇ ಉಳಿದು ಅಣೆಯುತ್ತಿದ್ದ ಚಿಲ್ಲರೆಕಾಸು ಮತ್ತು ವಯೋಸಹಜ ಹಂಬಲಗಳು! --ಇವೇ ತಾನೇ ಆ ಕೊನೇ ಅಂಕದ ಘಟಕಾಂಶಗಳು?!
*****
ಅಮ್ಮ ಆ ದಕ್ಷಿಣೆ ಕಾಸನ್ನ ತೆಗೆದು ಅಪ್ಪನ ಕ್ಯಾಷ್-ಡ್ರಾ ಗೋ ತನ್ನ ಡಬ್ಬಿಗೋ ಸೇರಿಸುತ್ತೀನಂದಳು. ಈ 'ವಿನಿಯೋಗ'ಕ್ಕೆ 'ಹೂಂ' ಅಂದೆ.
ಕಾಗದದ ದೋಣಿಗಳಿಗೆ
ಎಲ್ಲೂ ತೀರವಿರೋದಿಲ್ಲವು...
ಅಂಬಿಗನೇ,
ಯಾವೊಂದು ತೀರ
ವದು ತೀರ
ಕ್ಕೆ ಸೇರಿಬರುವುದೋ
ಅದು, ಎನ್ನಯ ತೀರವು..
ನೀರಿನೊಳಗೆ ಹರಿಯುತಿಹವು ಹಲವು ದಂಡೆ
ಒಡೆದಂಥವು;
ಬೀದಿಗಳಲಿ ಸಿಗುತಲಿಹವು ಸಕಲ ಆಸರೆ
ತಪ್ಪಿದಂಥವು
ಅಂಬಿಗನೇ,
ಆಸರೆಯೊಂದು ನಡುನೀರಲ್ಲಿ
ಸಿಗುವುದಾದರೆ ಅದು,
ಎನ್ನಯ ಆಸರೆಯು
ಮೂಲ :
ಗುಲ್ಜಾರ್ ವಿರಚಿತ,
ಖೂಬ್'ಸೂರತ್ (೧೯೭೫) ಚಲನಚಿತ್ರದಲ್ಲಿನ
"ಓ ಮಾಝಿ ರೇ.." ಗೀತೆ :
O Maanjhi Re
Apna Kinara
Nadiya Ki Dhara Hai
Saahilon Pe Behenewale
Kabhi Suna To Hoga Kahi
Kagazon Ki Kashtiyon Ka
Kahi Kinara Hota Nahi
O Maanjhi Re
Koi Kinara
Jo Kinare Se Mile Woh
Apna Kinara Hai
Paniyon Mein Bah Rahe hain
Kayee Kinare
Toote Huye
Raaston Mein Mil Gaye Hain
Sabhi Saharein
Choote Huye
O Maanjhi Re
Koi Sahara
Majdhare Mein Mile toh
Apna Sahara Hai...
ಅದು ಎಲ್ಲದು
ಅಳಿಸಿಸಿಕೊಂಡು ನಡೆ
ನಡೆದೂ ಉಳಿದುದರಿಂದ ಜೀವ
ನ ಮತ್ತೆ ಶುರುವೇ ಆಯಿತು
ಯಾವುದೋ ವಿವರದ ಉಳಿದರ್ಧ
ದಿಂದ ಶುರುವಾಗುವ ಈ ಟಿಪಿ
ಕಲ್ಲು ಕವನದ ಮುಕ್ತಾ
ಂತ ಸಾಲುಗಳು ಮುಂದುವರಿದಂತೆ ಹೊಸತು
ಸಂದರ್ಭಗಳಿಗೊಳಪಟ್ಟು ಒಟ್ಟಂದ
ದರ್ಥ ಗೂಡುತ್ತ ಗೂಢ ನಡೆಯಲಿ
ನಡೆವ ಬಗೆಯಲಿ
ಯಾರನ್ನೋ ಇಳಿಸಿ ಬಿಟ್ಹೋಗಲು
ಎಂಬುದಾಗಿ
ಅಲ್ಲ, ಮತ್ತೆ ಹತ್ತಿಸಿ ಕೊಂಡ್ಹೋಗಲು ನಿಂದ ಕಾರು
ಹಿಂದಿಂದೇನೂ ತಿಳಿಯದಂತೋರ್ವನು ಬಂದು
ಏನಾದರೂ ಸಹಾಯವಾಗಬಹುದೇ ಎಂದು ಇಹ
ದೊಳಗೆ ಕಳೆದ್ಹೋದುದರ ಪರ ಸುಳಿವನೀವಂತೆ
ಇಂದಿನೀಪುಟದೊಳು ನಿನ್ನೆಗೊಂಡಿಯನೊತ್ತಿದಾಗೆಂಬಂತೆ
ಯೂ ಅಲ್ಲವದು, ಭೂತದ ಹೊಳಹನಿಟ್ಟ ವರ್ತಮಾನ
****
ಮನಸ್ಸು ದೊಡ್ಡದು
ಮಾಡಿ ಕಡೆಗೂ ವ್ಯಾಲೆಂಟೈನು
ದಿನಾ ಅವಳಿಗಿಷ್ಟವೇ ಆಗುವ
ಪೆಂಡೆಂಟು ಉಡುಗೊರೆಯೆತ್ತಿ ಅವಳಂ
ಗಡಿಯಲಿ ಎದುರು ನಿಂದ
ರೂ ಗುರುತೇ ಇರದಂತೆ ಇದ್ದು ಬಿಟ್ಟಳು ರಂಡಿ
ಮಾರಾಯ ಅವಳು, ಮತ್ತೆ ಮತ್ತೇss
ರಿದಂತೆ ಮುತ್ತನಿನ್ಯಾರಿಗೋ ಈದೇ ಬಿಟ್ಟಳವಳಿಗದೇನಾಯ್ತಂ
ತದ್ದು ಸಹಿಸಲು ಸಾಧ್ಯವಿಲ್ಲದ್ದು
ಇದು ಇನ್ನು
ಡೈವೋರ್ಸು!
****
ನಿನ್ನಿಂದ ತೆಗೆಯದೇ
ನಿನ್ನ ನೀ
ಫೂಲು ಮಾಡಲಿಕ್ಕಾದೀತೆ?,
ತೆಗೆದು ಹಾಕುವ ಜಾಗವಿದ್ದು
ಹೋಗಿ ಅಳಿಸಿಸಿಕೊಂಡು ಬಂದಿದ್ದಾಳೆ
ಇದನೀಗನೀತನರಿಯುವುದೇ ಸರಿ
ಇಲ್ಲದೇ ಹೀಗೆ ಮುಂದೆ
ಹೋಗಲಾಗಲಿಕ್ಕಿಲ್ಲವಂತ...
ನನಗೋ ದಿಗಿಲಿಕ್ಕಿಕೊಳ್ಳುತ್ತೆ ದಶದಿಕ್ಕುಗಳಿಂದ ಕಾರ್ ಮುಗಿಲು ಢೀ ಹೊಡೆದು ಮುತ್ತಿಕ್ಕುವಂತೆ ಎದೆ ಬಿಚ್ಚಿ ಬಿರಿದು ಕಿಲಕಿಲನೆ ಬಡಿಯುವಾ ಹೃದಯ ಧಮನಿಗಳಲಿ ಧುಮ್ಮಿಕ್ಕುವ ನವ ನವೋನ್ಮಾದದುಮ್ಮೇದಿಯ ನೆನೆ ನೆನೆದಂತೆ ಹೀಗೆ ನಡೆದು ಬಿಡುವುದೇ ಇದು ನಡೆಯಬಾರದಿದ್ದಕ್ಕೆ ತಡೆಯಿಲ್ಲವೇ..
***
ಮಾಯೆ! ಎಂದೊಡನೆ ಕುಪ್ಪಳಿಸಿ ಕಿರಿಚುತ್ತಾಳೆ ಉನ್ಮತ್ತ ಕುಣಿಯುತ್ತಾಳೆ ಸ್ವಚ್ಛಂದ ಬಿಗಿಯಲೆತ್ನಿಸುತ್ತೇನೆ ಹಿಡಿದು ಸಡಿಲ ಜಾರುವ ಸ್ನಾಯುಗಳ ದ್ವಂದ್ವಗಳಲಿ ಕಳವಳಿಸಿ ಹೀಗೆ ಇದರೊಡನೆ ಏಗಿ ಏಗಿ ನಡೆದಂತೆ ಕಾಲ ತೇಗಿಯೂ ಬಿಡುವುದಾ ಹೇಗೆ?
***
ಈ ವಿಷಯೆ ನಶೆಯೇರಿದ ನಿಶೆ ತಹತಹಿಸಿ ತಡಕಾಡುತ್ತೇನೆ ಒಂದು ತೊಟ್ಟು ಸುಧೆಗೆ, ಸಿಕ್ಕೀತನ್ನುವದರಲ್ಲಿ ಶೀಶೆ ಕೈಜಾರಿ ಉರುಳಿಬಿಡುತ್ತೆ ಹಾ! ಮತ್ತೆ ಸಿಕ್ಕಿ ಬಂದರೂ ಆಕಸ್ಮಿಕ ಒಗ್ಗಿ ಬಂದರೂ ಸಹಜ ಬಗ್ಗಿಸಿಕೊಂಡರೂ ಬೊಗಸೆಗೆ ತುಸು ತುಸುವಾಗಿ ಸುಧೆ ಸೋರಿ ಹೋಗುತ್ತೆ, ವಿವಶ, ಇಜಾಝತ್ತ ಕಸಿಯುತ್ತ...
***
ಕಾಲದೊಡನೆ ದಾಪುಗಾ- ಲೋಟದಿ ಸೋತು ಹೃದಯ ನಿಂತೂ ಬಿಡುತ್ತೆ, -ಹಾಗೊಮ್ಮೆ, ತುಟಿಯಂಚಿನಲ್ಲಿ...
ಈ ಹೀಗೆ ಜಿಟಿಜಿಟಿ
ಜಡಿಯಲಿ ಮಳೆ
ಜಿಗುಟು
ಮಗುವಿನಳುನಗುಗಳಂದದಿ
ಮಾತು ಮೂಡದಂತ
ಭಾವಂಗಳ ಸೂಚಿಸುತ
ವಿಲಂಬಿತ ಧೃಪದ
ಬಂದಿಶೊಂದಾದಂತೆ
ರಾತ್ರಿಯೊಂದು
ಮುಕ್ಕಾಲು
ನನ್ನೊಳಿಳಿದಂತೆ
ಮಬ್ಬು
ನಿಷಾಧ ಹೊಡೆದಂತೆ
ಕಾವ್ಯ ಕಟ್ಟೋಣ
ಮಲ್ಹಾರ ವಿಸ್ತರಿಸಿ
ಹಾಡೋಣ...
ಇಲ್ಲವಾದಾಗ
ಕಾಲು
ಎಳೆದುಕೊಂಡು ಹೊರಟ
ಉಸುಕಿನೂರಲ್ಲಂತೂ ಆ ಹೊಸ
ನಸು ನಸುಕಲ್ಲೂ ಒಣ ಕನಸುಗಳ ಇತಿ ದಿಗ್
ದಿಗಂತವೇ ದಿಗಂತ ...
ಹಾ! ಮಳೆಯಿಲ್ಲ ಮೋಡಗಳ
ನೆರಳೇ ಇಲ್ಲ ಇದಕೆ
ಎಲ್ಲಿಯಂತವಂತ ಹುಡುಕಿ
ಕೊಳ್ಳೋಣವಂತ, ಕೊಲ್ಲೋಣವಂತ...
****
ನಿತ್ಯ ಹರಿದ್ವರ್ಣ ನೋಡಿ ನೋಡಿ
ನೋಡುವಲ್ಲಿ ದೃಷ್ಟಿ
ಪಾಳುಬಿದ್ದು ಚಾಳೀಸಾಗಿ
ಯಾ ಬೋರಾಗಿ ತಲೆಚಿಟ್ಹಿಡಿದ್ಹೋಗಿ
ಮರಳಿದ್ದಲ್ಲಿ ಬಿರುಬಿಸಿಲಲ್ಲಿ ಬರಿ ಹುರುಳು
ಹುರಿದರಳಿಸುವುದೆಂದು
ಬಂದೆವು, ನಾವು ಬಂದೇವು...
****
ಯಾವೂರುಕೇರಿಯ ಯಾವಾರೆಯೋಣಿಯಲಿ
ಎಲ್ಲಿ ಶ್ವಾನವೊ, ನಮ್ಮದಿದೆಂತ ಮಹಾ
ಪ್ರಸ್ಥಾನವೊ...
ವರ್ಷಗಳುರುಳಿದಂತೆ ತಲೆ
ತಳೆಯದ ಖಾಚಿತ್ಯ ವರ್ತನೆ
ಯೊಳಾವರ್ತವರ್ತವರ್ತನಿಸಿ
ಬಂದು ಅನಾಮತ್ತು ಡಬ್ಬಲೊಂದು
ಡಬ್ಬಲು ಜೀರೋನೆತ್ತಿ ತಾನೇ
ತಾನಾಗಿ ಕ್ಲಾಸಿಕ್ಕು
ಹಾವಾಡಿಸುತ್ತ ಸುತ್ತ ಸುತ್ತಲೂ ಸಿಕ್ಕು
ಸಿಕ್ಕಾಗಿ ಕೂತಂತೆ ಕೆಲಸವಿಲ್ಲ ಕಾರ್ಯವಿಲ್ಲೆಂಬಂತೆ ಸಿಕ್ಕು
ಬಿಡಿಸೋ ವಿದ್ಯೆ ಜನ್ಮಜಾತದಂತಾಗಿ ಮೆದುಳಿಗೆ
ಸ್ಕ್ರೀನುಸೇವರಿನಂತೆ ಮೇಲ್ನೋಟಕ್ಕೆ
ಸಿಗದಂತೆ ಬ್ಯಾಗ್ರೌಂಡಲ್ಲಿ ಹರಿಯುತ್ತೆ ಅಖಂಡ
ಲಹರಿಯೊಂದು ಮತ್ತೆ ಮುಂದು
ವರಿಯುತ್ತೆ (ಹೀಗೆಯಾದರೆ ನಾ
ಫಿಜಿಕ್ಸು ಮಾಡೋದೆಂದಿಗೆ ಮತ್ತೆಯಂತ ಚಿಂತೆ ಬೇರೆ
ಯೆಳೆಯಲ್ಲಿ ಸಮಾಂತರ ಹರಿ ಹರಿಯುತ್ತ ಕ್ಷೀಣ
ಆದ್ಯತೆಗಳಲ್ಲಿ) ಹಾಳಾಗಲಿ ಈ ಒಂದು
ಲಯ ವಿನ್ಯಾಸ ಛಂದಗಳನ್ನೋದದೇಕೆ ಹಾಗೆ
ತಲೆ ಸೆಳೆಯುತ್ತದಂತ
ಸಿಂಟ್ಯಾಕ್ಟಿಕಲಿ ಭಂಗಿಸಿದರೂ ಶನಿಪಿಶಾಚಿ
ಯಂತೆ ಯಂತದ್ದೋ ಪ್ಯಾಟ್ಟರ್ನು ಪುನರಾವರ್ತ
ಸಿಮ್ಯಾಂಟೆಕ್ಕಿನ ಮಟ್ಟದಲಿ ಹಂಗಿಸುತ್ತೆ ಮತ್ತದೇ
ಧಾಟಿಯ ಸಾವಿರ ಕಾವ್ಯವೆಂದು ಬರೆಸುತ್ತೆ ಅಟೊಮೆಟಿಕಲಿ
ಕರಣ ಹಾವಾಡಿಸಲು ಪ್ರವೃತ್ತಿಸುತ್ತೆ ಹಾಗೆ
ಬರೆದಿದ್ದರ ವಿನ್ಯಾಸ ಮುಚ್ಚಿಹಾಕಲು ಅದೇ
ಹಳೇಯ ಬೌದ್ಧಿಕ ಕಸರತ್ತಿನ ಮಾರ್ಪಾಡುಗಳು ಮತ್ತೆ
ಇಷ್ಟಕ್ಕೂ, ಹೇ, ಆಧುನಿಕ
ಕಾವ್ಯವೆಂದರೇನು? ಗದ್ಯವೊಂದು ಕೂಡ ಕಾವ್ಯ
ವಂತನಿಸೋವಲ್ಲಿಗೆ, ಬರೆದ ಕವನಗಳು ವಾಚ್ಯ
ಗದ್ಯವೆನಿಸೋ ಹೊತ್ತಿಗೆ? ಬರೀತ ಮೂಲ
ಧಾತುಗಳ ಕರ್ಮಗಳ ಮೆರೆದು
ವಿಭಕ್ತಿ ಕರ್ತೃ ಎಲ್ಲ
ಮರೆದು ಸಮಾಸ ನಿಷ್ಪತ್ತಿ ಸಂಧಿ
ವಿಗ್ರಹಗಳ ಅಡ್ಡ
ಗೋಡೆ ಮೇಲಿಟ್ಟ ಉದ್ದೇಶಪೂರಿತ ಮಬ್ಬುತನಕ್ಕೆ
ಅಮೂರ್ತ ಬಹುಅರ್ಥಪೀಡಿತವಂತ ಸಂ
ಭ್ರಮಿಸಿ ತನಗೇ ಗೊತ್ತಿಲ್ಲದ ಪ್ರಶ್ನೆ
ಮೂಡಿದಂತಾಗುವಲ್ಲಿ ಬಾಲರ ಪ್ರತಿಭೆಯಲ್ಲಿ ಉತ್ತರ
ತರಿಸೋ ಭೂಪ, ಕಂತ್ರಿ, ಪ್ರಾಧ್ಯಾಪಕ-
ಬುದ್ಧಿ! ಶಡ್ಡೌನಾಗಬಾರದೇ ಸಡನ್ನಾಗಿ
ಕರೆಂಟು ಕಟ್ಟಾಗಿ...
....._____.....
---------------------------------------------------------------------------- ಒಬ್ಬೊಬ್ಬರ ತಲೇಲೂ ಒಂದೊಂದು ಥಿಯರಿ ಇರುತ್ತೆ; ಈ ಜಗತ್ತಲ್ಲಿ ಅದಕ್ಕೆ ಪುರಾವೆ ಹುಡುಕ್ತಿರ್ತೀವಿ... (ಚಿದಂಬರ ರಹಸ್ಯ) ----------------------------------------------------------------------------
ಗುರುಗಳೇ,
ಒಂದು ಅರೆಪಾರದರ್ಶಕ ನಿಲುವು-
ಗನ್ನಡಿಯ ಇಬ್ಬದಿಗಳಲ್ಲಿ
ಕೂತಿದ್ದೇವೆ ಇಬ್ಬರೂ
-ಎದುರುಬದರಾಗಿ ಒಬ್ಬರನಿನ್ನೊಬ್ಬರು
ಒಂದು ಬಿಂಬ, ಮತ್ತಿನ್ನೊಂದರ ಪ್ರತಿಬಿಂಬ
ಒಂದರಮೇಲಿನ್ನೊಂದು ಮಜವಾಗಿ ಬಿದ್ದು
ದ್ವಂದ್ವವೆಂಬವುಗಳ ಮಧ್ಯೆ ಹೀಗೆ
ಗೆರೆ ಮಾಸಲು, ತೆರೆ ಪೋರಸ್ಸು
ಇತ್ತಲಾಗಿ
ಹದಿ ಈಗಷ್ಟೇ ಹರಿದಿದೆ
ಉಕ್ಕಿ ಬೀಳುತ್ತ ಬೆದೆ
ನಿದ್ದೆಯಲ್ಲೂ ಎವೆ ಬಿಟ್ಟಿವೆ
ಕನ್ನಡಿಯೆದುರು ತಂದು, ತೀಡಿ
ತಿದ್ದಿಕೊಳ್ಳುವ ತವಕ
ನನ್ನ ನೋಡಿಕೊಂಡಷ್ಟೇ ನಿಮ್ಮ ಕಡೆಯೂ;
ಬೆಡಗಿಗಷ್ಟೇ ಅಲ್ಲದೇ ಲಕ್ಷ್ಯ ಪೂರ್ಣತೆಯೆಡೆಯು.
ಅತ್ತಲಾಗಿ
ನೋಡುವಲ್ಲಿ ನನ್ನ ಪ್ರಸ್ತುತ
ವಾಗುತ್ತಿದೆಯಲ್ಲಿ ನಿಮ್ಮದೇ ಗತ
ನಿಂಭೂತೋ ನಂಭವಿಷ್ಯತ್ತಾ?
ಅಡ್ದಗೋಡೆಯ ಮೇಲೆ ದೀಪವಿಟ್ಟವರು
ಗಾಜ ಕಿಟಕಿಯಿಟ್ಟು ಕೆಳಗೆ ಬಿಂಬಕಾಣುವವರು
ಬಣ್ಣಬಣ್ಣದಿ ಪ್ರತಿ ಬಿಂಬಿಸ ಹೊರಟವರು
ಟೀಕೆಟಿಪ್ಪಣಿಸಿ ಅಡ್ವಯಿಸು ಬೀರಬೇಕಾದವರು
ವಿವರದರ್ಧದಲಿ ಭೂತ ಭಾಧೆಯಾದಂತೆ
ತಡವುತ್ತೀರಿ ತಲೆ ಕೊಡವುತ್ತೀರಿ.
ಕಣ್ತುಂಬ ತುಂಬಿಕೊಂಡು ಬಾಯ್ತುಂಬ ಬೈವವರು
ಒಂದು ನಿರೀಕ್ಷಣಾಜಾಮೀನಿಗೆಂಬಂತೆ ಹೀಗೆ ತಾವನುಸರಿಸುವ
ಸ್ವನಿರಾಕರಣೆಯಲ್ಲಿ ಮಾತ್ರ ನೋಡಿ ನನಗೆ
ಕಂಡು ಬಿಟ್ಟಂತಾಯ್ತು ಥೇಟು ನನ್ನದೇ ಪ್ರತಿಬಿಂಬ!