Wednesday, July 22, 2020

ಆತ್ಮಸಂಭಾಷಣೆ

-:ಒಂದತೀಸಣ್ಣಕಥೆ:-

"ಆತ್ಮಸಂಭಾಷಣೆ"



ಇಹದಲ್ಲಿ ಸೋತರೂ ಪರವಾಗಿಲ್ಲವೇ!

Saturday, June 20, 2020

ದೂರದಲ್ಲೆಲ್ಲೋ ದಿನ ಮುಳುಗಿದಂತೆ / kahin door jab din dhal jaayen / योगेश गौर


ಇತ್ತೀಚೆಗೆ ನಿಧನರಾದ ಹಿಂದಿ ಚಲನಚಿತ್ರಗೀತಸಾಹಿತಿ, ಶ್ರೀಯುತ ಯೋಗೇಶ್ ಗೌರ್ , ಅವರ ಬಗ್ಗೆ ನಮಗೆ ತಿಳಿದದ್ದು ಕಡಿಮೆಯೇ... 
ಹಾಗಿದ್ದಾಗ್ಗೆಯೂ, ಹೃಷಿಕೇಶ ಮುಖರ್ಜಿಯವರ ದಿಗ್ದರ್ಶನದ 'ಆನಂದ್' ಸಿನೇಮಾದಲ್ಲಿ ಅವರು ಬರೆದ, ಮುಖೇಶ ಹಾಡಿದ, ರಾಜೇಶ್ ಖನ್ನನ ಅಭಿನಯಿಸಿದ ಈ ಭಾವಗೀತಾತ್ಮಕ ಹಾಡು ನಮ್ಮ ಯಾವತ್ತು ಹೃನ್ಮನಗಳನ್ನು ಅದೆಂದೂ ತಾಕಿದ್ದಿದು ಹೌದು.

ಹಾಡಾಗಿಸಿ ಅಮರರಾದವರೆಲ್ಲರಿಗೂ ಕಿರುಕಾಣಿಕೆಯಾರ್ಪಣೆಯಾಗಿ ಈ ಹಾಡನುವಾದ.


   ************************************ 


ಎಲ್ಲೋ ದೂರದಿ
ದಿನ ಮುಳುಗಿದಂತೆ
ಗೋಧೂಳೀ ವಧುವದು
ವದನ ಕದ್ದಂತೆ
ಸದ್ದಿಲದೇ ಬಂದಂತೆ

ಎನ್ನ ಕಲ್ಪನೆಗಳಾಂಗಳದಲಿ
ಯಾರೋ ಕನಸುಗಳ
ದೀಪ ಹಚ್ಚಿದಂತೆ

**

  ಅದೊಮ್ಮೆ ಉಸಿರದು ಭಾರವಾದಂತೆ
ತುಂಬಲು ಕಂಗಳು ಇದ್ದಕಿದ್ದಂತೆ

ಆಗ್ಗೆಯೇ ಮಿಡಿದು
ಒಲವಲಿ ನಡೆದು
ಸ್ಪರ್ಶಿಸುವರಾರೋ ಎನ್ನ
ಅದೃಶದಲೆಂಬಂತೆ

**

ಒಮ್ಮೊಮ್ಮೆಯೆಲ್ಲಿ ಹೃನ್ಮನ ಸೇರವೊ ಅಂತೇ  
ಬಂದಾವು ಸಂಬಂಜ ಜನ್ಮಾಂತರವೆಂಬಂತೆ 

ಘನ ಸಂಕಟವು
ವೈರಿಯೆನ್ನ ಮನವು
ನನ್ನದಾಗಿಯೂ ಸಹಿಪುದು
ಅವರ ನೋವಂತೆ

**

ಅರಿವುದು ಎದೆಯದು ಗುಟ್ಟೆಲ್ಲದನು
ಹೊಂಗನಸುಗಳನು ಹೊಳೆಯಿಸುವುದನು

ಎನ್ನೀ ಕನಸುಗಳು
ಇವೇ ನನ್ನವುಗಳು
ಎನ್ನನಗಲಾರವು
ಇವುಗಳ ನೆರಳೂ.

***


  *****************************************************


ಅನುವಾದಿಸುವಾಗ ಹೊಸದಾಗಿ ಕಣ್ಣ ಕೋರೈಸಿದ ಈ ಹಾಡಿನ ಸಾಲುಗಳ ತನ್ನದೇ ಆದ ಸಾಂಧರ್ಭಿಕ ಅನ್ವರ್ಥತೆಗಳು ಮತ್ತೊಮ್ಮೆ ಹೃನ್ಮನಕಂಗಳನ್ನು ಭಾರವಾಗಿಸಿದವು.
 
ಹಾಗ್ಗೆ, ಅನುವಾದಕ್ಕಿಳಿವ ಮುನ್ನ ಎಲ್ಲವೂ ಗೊತ್ತು ಎನಿಸುವುದು -- ಅನುವಾದಕ್ಕಿಳಿದಾಗ ಇದೆಲ್ಲ ಗೊತ್ತೇ ಇರಲಿಲ್ಲವಲ್ಲ ಎಂದಾಗವುದು.., ಇದೆಲ್ಲ ಯಥಾಪ್ರಕಾರವೇ!
 
ಈ ಹಾಡಿನ ಸಂಗೀತ ನಿರ್ದೇಶಕ ಸಲಿಲಚೌಧರಿಯವರು ಬೆಂಗಾಲಿಯಲ್ಲಿ ಇದೇ ಧಾಟಿಯಲ್ಲಿ ಈ ಮುಂಚೆಯೇ ಇನ್ನೊಂದು ಹಾಡನ್ನು ಸಂಯೋಜಿಸಿರುವುದೂ ತಿಳಿಯಿತು. ಅದರ ಸಂದರ್ಭ-ಅರ್ಥಗಳೆಲ್ಲ ಬೇರೆಯಿದ್ದರೂ ಸಂವೇದನಾಶೀಲವಾಗಿಯಂತೂ ಇರುವುದು ಅನುಭವವೇದ್ಯವಾಯಿತು.

ಅಂದರೆ, ನಮ್ಮ ಈ
ಪ್ರಸ್ತುತ ಚಿತ್ರಗೀತ ಸಾಹಿತಿ ದಿವಂಗತ ಶ್ರೀ ಯೋಗೇಶ್ ಗೌರ್ ಅವರು, ಆನಂದ ಸಿನೆಮಾದ ಸಂದರ್ಭದೊಟ್ಟೊಟ್ಟಿಗೆ ಈ ಮೊದಲೇ ಸಂಯೋಜಿತವಾದ ಸಂಗೀತಕ್ಕೆ ತಕ್ಕಂತೆ ಬರೆಯುವ ಪಣವನ್ನು ಸಹಾ ಏಕಕಾಲದಲ್ಲಿ ಸುಲಲಿತವಾಗಿ ನಿಭಾಯಿಸಿದ್ದಾರೆ ಎನ್ನಬಹುದು. ಅವರಿಗೆ ನಮ್ಮ ನಮನಗಳು.



Sunday, April 26, 2020

ಕಥಾಶಿರಸ್ಸು


ಐಎಮ್ಮು ಈ ಕಥಾರಸಿಸ್ಸು
ಏವಠಾರ ಸ್ಟೇಟ್ಸು
ಹೊಂದಿ ಹೊಂದಿ ಚಟಕ್ಲೀಷೆಯಾಗಿ
ರಸ್ತೆಮಗ್ಗುಲಗುಂಟ ನಡೆದದ್ದು
ವಾಸ್ತವ್ಯಕ್ಕೆ ಪರ್ಪೆಂಡಿಕ್ಯುಲರಾಗಿ
ಪ್ರೊಕ್ರಾಸ್ಟಿಸುತ್ತ ಸತ್ತು  
ಬಿದ್ದಗತಾ
ಶಿರಸ್ಸು
.




----------------------------------
*ತಿರುಮಲೇಶತ್ರಿಬ್ಯೂಟು   
*Avatar-tLAb ರೆಫರೆನ್ಸು

Wednesday, January 8, 2020

ಕುಂಕುಮ | ಶಹರ ಮಕ್ಕೊಂಡಾಗ್ಗೆ | ರಕ್ತರಾತ್ರಿ

===================================================
Date: Fri, Sep 8, 2017 at 6:59 AM
Subject: ಅನುವಾದ: ಯಾವ ರಾತ್ರಿ ಮುಗಿಲಿಂದ ರುಧಿರವೇ ಸುರಿಯಿತೊ
To:

Dears,

translation in progress
impatience too much
times running out
help through your
comments and suggestions pls ..

twbr,
durahankari duRANdhararu

------------------------------------------------------------------------------------------------------

occasion : presentimes
moovie: Gulal
musicist lyricist singer: Piyush Mishra

links:
https://youtu.be/yQ0t8LcL498
https://creationsgalorehere.wordpress.com/2014/08/06/jab-sheher-humara-sota-hai-gulaal-lyrics-hindi/
http://bwlyric.blogspot.it/2013/12/sheher-gulaal.html







===================================================


ಒಂದುಕಾಲದ ಮಾತು ಹೇಳೋಣು
ಆದೊಂದು ಕಾಲದಲೆ
ಯಾವಾಗ್ಗೆ -
ಶಹರ ನಮ್ಮದು ಮಲಗಿಬಿಟಿತ್ತೊ
ಆ ರಾತ್ರಿ ಮಾಯಕದಲೆ

ನಾಕೂಕಡೆಯು ಮಿಕ್ಕೆಲ್ಲ ದಿಕ್ಕಿಂದಲೂ
ಕೆಂಪೇ ಹೊಚ್ಚಿತಲೆ
ಮಿಂಚುಳ್ಳೆ ಕುಣಿದುದು ಸೆರಗನು ಹೊದ್ದು
ರುಧಿರವೆ ಮಿಂದಿತಲೇ

ನಾಕುಕಡೆಯಲು ಕುಂಕುಮವೆ ಛಾಪಿಸಿತಲೆ
ನಾಕೂಕಡೆಯಲೂ
ವಿಪತ್ತಿಯಾವರಿಸಿತಲೇ..


ಯಾವ ರಾತ್ರಿ ಮುಗಿಲಿಂದಲೆ
ರಕುತದ ಮಳಿಯೇ ಬಂದಿತ್ತಲೇ..


ಮಿಂದೆಹೋಯಿತು ಊರೆಲ್ಲವೂ
ಮಿಂದೆಹೋಯಿತು ಮಣ್ಣೆಲ್ಲವೂ
ಮಿಂದೆದ್ದಿತೇ ಸಕಲ ಜನಸ್ತೋಮವು

ಇಡೀ ಜಗತ್ತು ಕೇಳಿತು ಆಗಲೇ
ಇಷ್ಟೆಲ್ಲಾ ಆಗ್ತಿತ್ತ ಹಂಗಾದರ
ಅವಾಗಲೇನಣ ಕಣ್ಣಾಮುಚ್ಚೆ
ಮಕ್ಕೋಂಬಿಡೋದು ನೀನಾದರ

ಶಹರ ಹಿಂಗಂತಲೇ
ಹ್ಯಾಂಗ ಹೇಳೋಣು ಎಂಥಾ
ನಿದಿರಿ ಬಂತಂದರ..


ಯಾವ ರಾತ್ರಿ ಮುಗಿಲಿಂದಲೆ
ರಕುತದ ಮಳಿಯೇ ಬಂದಿತ್ತಲೇ..



ಸ್ಮಶಾನ ಮೌನವೋ ಮೂಕವೋ
ತಿಳಿಯದಂತೆ
ಜೀವನವನೆ ಕಸಿಯುತ್ತೆ
ಮಗ್ಗಲು ಬದಲಿಸಿದಂತೆ
ಬಿರುಗಾಳಿಯಂತೆ
ಮುತ್ತಿಕ್ಕುತವೆ ನೆರಳುಗಳು ಕಪ್ಪಿಡುವಂತೆ
ಒರಟು ಕೂದಲೆಲ ಕೆದರಿದಂತೆ
ನುಗ್ಗುತ್ತವೆ ಮಬ್ಬು ಪಿಶಾಚರಂತೆ
ಕಂಪಿಸುತ್ತೆ ಜೀವ ಅವು ಕುಣಿದಂತೆ


ಅಲ್ಲೆಲ್ಲೋ ಆ ಬೂಟುಗಳ ಟಕಟಕೆಯು
ಅಲ್ಲೆಲ್ಲೋ ಆ ಕೆಂಡಗಳ ಚಟಪಟೆಯು
ಅಲ್ಲೆಲ್ಲೋ ಆ ಜೀರುಂಡೆಗಳ ಕೀರಲು
ಅಲ್ಲೆಲ್ಲೋ ಆ ನಲ್ಲಿಯ ಟಿಪಟಿಪೆಯು
ಅಲ್ಲೆಲ್ಲೋ ಆ ಕಪ್ಪು ಕಿಡಕೀಯು
ಅಲ್ಲೆಲ್ಲೋ ಆ ಮಬ್ಬು ಚಿಮಣೀಯು
ಅಲ್ಲೆಲ್ಲೋ ಆ-ಕಳಿಸೋ ಗಾಳಿಮರಗೋಳು
ಅಲ್ಲೆಲ್ಲೋ ಅಡ್ಡಗೋಡೆ ಮೇಲಿಟ್ಟಂತೇನೇನೋ...
ಏಳೇಳೇಳೇಲೆಲೆಲೇಲೇಲೇ.. ಹೋ!


ಸ್ಮಶಾನಗಲ್ಲಿಯಲ್ಯಾವ ಮೂಲೆಯಲದೆಂದು ನಾಯಿ ಯಾವ್ದೋ
ಚೀರಿ ಚೀರುತ್ತ ರೋಧಿಸಿತ್ತಲೆ
ಅದ್ಯಾವಾಗ್ಗೆ ಬೀದಿಗಂಬದ ಗಬ್ಬು ಮಬ್ಬಲ್ಲಿ
ಏನ್ ಏನೋ ನಡೀತಿತ್ತಲೆ
ನೆರಳು ಯಾವುದೋ ತುಸುತುಸುವೇ ಯಾವತ್ತನು
ನಾಪತ್ತೆನೆರಳುಗೋಳಲಿ ಕಳೀತಿತ್ತಲೆ
ಸೇತುವೆಗಂಬಗತ್ತಲೆಗೋಳಿಗೆ ಬೆಚ್ಚಗ್ಯಾವಾಗ್ಗೆ
ನಿಧಾನ ಮೋಟಾರು ಬೆಳಗುತಿತ್ತಲೆ

ಆಗ್ಗೆ,

ಶಹರ ನಮದು ಮಕ್ಕೊಂತಲೆ  ||(೩ಸಲ)||


ಶಹರ ನಮ್ಮದು ಮಕ್ಕೋಂಡಾಗಲೆ
ಗೊತ್ತಾ ನಿನಗ ಏನ್ ಏನೆಲ್ಲ ನಡೀತೈತೆss
ಇತ್ತ ಹೆಣಗಳೆದ್ದು ಕುಣಿಯುತ್ತಲೆ
ಅತ್ತ ಬದುಕಿದವ ಶವ ಸಾಯುತ್ತ್ತಲೆ
ಇತ್ತ ಚೀರುವಳು ಫ್ರೀಯಾಸ್ಪತ್ರೆಯಲಾಕೆ ಕಂಪಿಸುತ್ತಲೆ
ಅವಳೆದುರ ಬರತೈತ ಮತ್ತ ನವಮಾಂಸದ ಒಂದು ಮುದ್ದೆ
ಇತ್ತಲೇಳ್ತವೆ ತಕರಾರುಗೋಳೆತ್ತರೆತ್ತರ ಮೈಮೈಗೋಳ ಜಟಾಪಟಿ ಲೇವಾದೇವೀಲೇ
ಅತ್ತ ಸಂಭಧಗಳುಬ್ಬಿಸುತ ಘಾಯ,  ಕಂಡರೂವೆ ದೂರದಲಲೆವ ಕಂಗಳದುವ ಸತ್ತಂತಲೆ
ಅದರೂ ಅದನೆ ಎತ್ತಿ ಬಣ್ಣಬಣ್ಣಗಳ ಹರಕೆಜಾತ್ರೆಗೋಳೇ ಆಗತೈತಲೆ
ಮದ್ಯಮಧ್ಯೇ ಮಿಂದ ನೈವೇದ್ಯೆಯಿಂದಲೆದ್ದುದಿಸಿದೇ ಕುಚೋದ್ಯೆ
ಅರೆನಗ್ನದೇಹಗಳ ನೋಡು ಹೇಗೆ ತೊಡೆದು ಶೃಂಗಾರ ಮಾಡೈತೆಲೆ
ಕೆಂಪುಬಳ್ಕಂಮುಸುಡಿಗಳಿಗೇನೇನೋ ಪುಂಡಾಟಿಕೆ ನಡೆಸೋಕಲೆಲ್ಲೋ ತುರಿಸೈತೆ


ಅವರೆಲ್ಲ ಕೇಳ್ತಾರೆ ಹೈರಾಣಾಗೇ, ಹೀಗೆಲ್ಲಾ ಅಗೋದ್ ಯಾವಾಗ್ಗೆ
ಅದ ತಿಳಿಸಿಬಿಡು ಅವರಿಗೆ, ಹೀಂಗ ಹಿಂಗಾಗೋದು ಯಾವ್ ಯಾವಾಗ್ಗೆ

ಅಂದರ,

ಶಹರ ನಮದು ಮಕ್ಕೊಂಡಾಗ್ಗೆ
ಶಹರ ನಮ್ಮದು ಮಕ್ಕೊಂಡಾಗ್ಗೆ
ಶಹರ ನಮ್ಮದು ಮಕ್ಕೊಂಡ್ಹಾಗೇ

ಹೋ..!